Sunday, 11th May 2025

ಕೆ. ಚಂದ್ರಶೇಖರ್ ರಾವ್ ಶೀಘ್ರದಲ್ಲೇ ವಿಆರ್‌ಎಸ್ ತೆಗೆದುಕೊಳ್ಳಲಿದ್ದಾರೆ: ಜೆಪಿ ನಡ್ಡಾ

J P Nadda

ಹೈದರಾಬಾದ್: ಟಿಆರ್‌ಎಸ್ ಬಿಆರ್‌ಎಸ್ ಆಗಿದ್ದು, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್‌ಎಸ್  ತೆಗೆದುಕೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕುಟುಕಿದ್ದಾರೆ.

ಮುಂದಿನ ವರ್ಷ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಬೆಂಬಲಿಸುವಂತೆ ಎಲ್ಲಾ ವರ್ಗದ ಜನರಿಗೆ ಅವರು ಮನವಿ ಮಾಡಿದ್ದಾರೆ.

ತೆಲಂಗಾಣ ಸಿಎಂ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆಸಿಆರ್ ಅವರು ನವದೆಹಲಿಯಲ್ಲಿ ಪಕ್ಷದ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ಒಂದು ದಿನದ ನಂತರ ನಡ್ಡಾ ಅವರು ಈ ಹೇಳಿಕೆ ನೀಡಿದ್ದಾರೆ.

ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಸಾಮರ್ಥ್ಯ ಬಿಜೆಪಿಗೆ ಮಾತ್ರ ಇದೆ. ಭ್ರಷ್ಟಾಚಾರ, ಕುಟುಂಬ ಆಡಳಿತದ ವಿರುದ್ಧ ಯಾರೇ ಇರಲಿ, ನಮ್ಮೊಂದಿಗೆ ಕೈಜೋಡಿ ಸುವುದನ್ನು ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

ಕರೀಂನಗರದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಅವರ ಐದನೇ ಹಂತದ ಪ್ರಜಾ ಸಂಗ್ರಾಮ ಪಾದಯಾತ್ರೆಯ ಸಮಾರೋಪಕ್ಕೆ ಉತ್ತರ ತೆಲಂಗಾಣ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ರ್‍ಯಾಲಿ ಯಲ್ಲಿ ಪಾಲ್ಗೊಂಡು ನಡ್ಡಾ ಮಾತನಾಡಿದರು.

ತೆಲಂಗಾಣದಂತಹ ಶ್ರೀಮಂತ, ಆದಾಯ ಇರುವ ರಾಜ್ಯವನ್ನು ಕೆಸಿಆರ್, ಬಡತನ ಮತ್ತು ಸಾಲದ ಭಾರಕ್ಕೆ ಸಿಲುಕಿಸಿದ್ದಾರೆ. ಆದರೆ, ಅವರ ಕುಟುಂಬವು ಭ್ರಷ್ಟಾಚಾರ ಮಾಡಿ ಅಪಾರ ಸಂಪತ್ತನ್ನು ಸಂಗ್ರಹಿಸಿದೆ ಎಂದು ಆರೋಪಿಸಿದರು.

‘ಕೇಂದ್ರ ಏಜೆನ್ಸಿಗಳು ತಮ್ಮ ಮಗಳು ಕವಿತಾ ಅವರನ್ನು ವಿಚಾರಣೆ ನಡೆಸಿದ್ದಕ್ಕೆ ಕೆಸಿಆರ್ ಕೋಪಗೊಂಡಿರಬಹುದು, ಆದರೆ, ಕಾರಣವನ್ನು ಜನರು ತಿಳಿದುಕೊಳ್ಳಬೇಕು’ಎಂದು ಹೇಳಿದರು.

Read E-Paper click here