Tuesday, 13th May 2025

ಮುಂಬೈ, ಗೋವಾದ ವಿವಿಧೆಡೆ ಎನ್‍ಸಿಬಿ ಸರಣಿ ದಾಳಿ

ಮುಂಬೈ/ಪಣಜಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ತಂಡಗಳು ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ.

10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾ ರಣೆಗೆ ಒಳಪಡಿಸಿದ್ದಾರೆ. ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ.

ತನಿಖೆ ತೀವ್ರಗೊಳಿಸಿರುವ ತನಿಖಾ ಸಂಸ್ಥೆ ಪ್ರಕರಣದಲ್ಲಿ ಹೆಸರಿಸಲ್ಪಟ್ಟಿರುವವರ ಜಾಡು ಹಿಡಿದು ತನಿಖೆ ನಡೆಸುತ್ತಿದ್ದು, ಇನ್ನೂ ಕೆಲವರು ಬಂಧನಕ್ಕೆ ಒಳಗಾಗುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *