Sunday, 11th May 2025

ನಾನು ಸಚಿವಾಕಾಂಕ್ಷಿಯಲ್ಲ, ಅದಕ್ಕಾಗಿ ಲಾಬಿಯೂ ಮಾಡಲ್ಲ: ರೇಣುಕಾಚಾರ್ಯ

ನವದೆಹಲಿ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನಾನೂ ಕೂಡ ಸಚಿವಾಕಾಂಕ್ಷಿ. ಆದರೆ ಲಾಬಿ ನಡೆಸಲ್ಲ ಎಂದಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಾನೂ ಸಚಿವನಾಗಬೇಕಂಬ ಆಸೆಯಿದೆ. ಹಾಗಂತ, ಲಾಬಿ ನಡೆಸಲು ನಾನು ದೆಹಲಿಗೆ ಬಂದಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ನೀಡಬಾರದು ಎಂಬುದು ಸಿಎಂ ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದರು.

ನಾನು ನನ್ನ ಕ್ಷೇತ್ರದ ಕೆಲಸದ ನಿಮಿತ್ತ ದೆಹಲಿಗೆ ಬಂದಿದ್ದೆಯಷ್ಟೇ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.
ಯಡಿಯೂರಪ್ಪನವರೇ ಪೂರ್ಣಾವಧಿ ಮುಗಿಸಲಿದ್ದಾರೆ. ಅವರು ಪ್ರಶ್ನಾತೀತ ನಾಯಕ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಊಹಾಪೋಹ. ಸಿಎಂ ಬಿಎಸ್ವೈ ದೆಹಲಿ ಪ್ರವಾಸ ವಿಚಾರಕ್ಕೆ ಸಿಎಂ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *