Wednesday, 14th May 2025

ಮಣಿಪುರದಲ್ಲಿ ಉಗ್ರರ ಅಟ್ಟಹಾಸಕ್ಕೆ ಮೂವರ ದುರ್ಮರಣ

ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ತಂದೆ-ಮಗ ಸೇರಿದಂತೆ ಮೂವರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ಜಿಲ್ಲೆಯ ಕ್ವಾಕ್ಟಾದಲ್ಲಿ ಮೂವರು ಮಲಗಿದ್ದಾಗ ಗುಂಡೇಟಿನಿಂದ ಹೊಡೆದು ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ದುಷ್ಕರ್ಮಿಗಳು ಚುರಾಚಂದ್‌ಪುರದಿಂದ ಬಂದವರು ಎಂಬ ಮಾಹಿತಿ ಸಿಕ್ಕಿದೆ.

ಮೃತಪಟ್ಟ ಮೂವರು ಪರಿಹಾರ ಶಿಬಿರದಲ್ಲಿ ಇರುತ್ತಿದ್ದರು. ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸ್ವಲ್ಪ ಶಾಂತವಾಗಿದೆ ಎಂದು ತಿಳಿದ ನಂತರ ಕ್ವಾಕ್ಟಾದಲ್ಲಿನ ತಮ್ಮ ನಿವಾಸಗಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ನಂತರ ಕ್ವಾಕ್ಟಾದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಉದ್ರಿಕ್ತ ಗುಂಪೊಂದು ಚುರಾ ಚಂದ್‌ಪುರದ ಕಡೆಗೆ ಹೋಗಲು ಬಯಸಿತು ಆದರೆ ಭದ್ರತಾ ಸಿಬ್ಬಂದಿ ಅವರನ್ನು ತಡೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಫೌಗಕ್ಚಾವೊ ಮತ್ತು ಕ್ವಾಕ್ಟಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾಜ್ಯ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹೇಳಿದರು. ಮಣಿಪುರ ಪೊಲೀಸರು ಜಂಟಿ ಭದ್ರತಾ ಪಡೆ ಕೌಟ್ರುಕ್ ಬೆಟ್ಟದ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಏಳು ಅಕ್ರಮ ಬಂಕರ್‌ಗಳನ್ನು ನಾಶ ಪಡಿಸಿ ದ್ದಾರೆ ಎಂದು ಹೇಳಿದರು.

ಮಣಿಪುರದ 27 ವಿಧಾನಸಭಾ ಕ್ಷೇತ್ರಗಳ ಸಮನ್ವಯ ಸಮಿತಿಯು ಕರೆದಿರುವ 24 ಗಂಟೆಗಳ ಸಾರ್ವತ್ರಿಕ ಮುಷ್ಕರವು ಇಂಫಾಲ್ ಕಣಿವೆಯಲ್ಲಿ ಸಾಮಾನ್ಯ ಜೀವನವನ್ನು ಸ್ಥಗಿತಗೊಳಿಸಿದೆ.

Leave a Reply

Your email address will not be published. Required fields are marked *