Thursday, 15th May 2025

ಸಿ.ಟಿ.ರವಿಗೆ ದಕ್ಷಿಣ ಭಾರತದ ಉಸ್ತುವಾರಿ

ನವದೆಹಲಿ: ಕರ್ನಾಟಕದ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿಯವ ರಿಗೆ ಪಕ್ಷದ ಹೈಕಮಾಂಟ್ ಮಹತ್ವದ ಹೊಣೆಗಾರಿಕೆ ನೀಡಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕರಾದ ಹಿನ್ನೆಲೆಯಲ್ಲಿ ಕೆಲವೇ ದಿನಗಳ ಹಿಂದೆ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರಧೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ತಾತ್ಕಾಲಿಕ ಉಸ್ತುವಾರಿ ವಹಿಸಿದ್ದ ಬಿಜೆಪಿ ಹೈಕಮಾಂಡ್ ಇದೀಗ ಸಿ.ಟಿ ರವಿ ಅವರನ್ನು ದಕ್ಷಿಣ ಭಾರತದ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.

ಈ ಮೊದಲು ಈ ಉಸ್ತುವಾರಿಯನ್ನು ಕರ್ನಾಟಕದವರೇ ಆದ ದಿವಂಗತ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್‌ ವಹಿಸಿ ಕೊಂಡಿದ್ದರು. ಈಗ ಇದೇ ಹೊಣೆಗಾರಿಕೆಯನ್ನು ಸಿ.ಟಿ.ರವಿಗೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *