Wednesday, 14th May 2025

ಬಿಸಿಎಎಸ್‌ ಮಹಾನಿರ್ದೇಶಕರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ನೇಮಕ

ನವದೆಹಲಿ: ನಾಗರಿಕ ವಿಮಾನಯಾನ ಭದ್ರತಾ ವಿಭಾಗದ (ಬಿಸಿಎಎಸ್‌) ಮಹಾನಿರ್ದೇಶಕ ರನ್ನಾಗಿ ಐಪಿಎಸ್‌ ಅಧಿಕಾರಿ ಎಂ.ಎ.ಗಣಪತಿ ಅವರನ್ನು ನೇಮಕ ಮಾಡಲಾಗಿದೆ.

ನಾಗರಿಕ ವಿಮಾನಯಾನ ಸಚಿವಾಲಯ ಕಳುಹಿಸಿರುವ ಗಣಪತಿ ಅವರ ನೇಮಕಾತಿ ಪ್ರಸ್ತಾವನೆಗೆ ಪ್ರಧಾನಮಂತ್ರಿ ನೇತೃತ್ವದ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಗಣಪತಿ ಅವರು 2024ರ ಫೆಬ್ರುವರಿ 29ರಂದು ನಿವೃತ್ತಿಯಾಗಲಿದ್ದು, ಅಲ್ಲಿಯ ವರೆಗೂ ಈ ಹುದ್ದೆಯಲ್ಲಿ ಮುಂದು ವರಿಯಲಿದ್ದಾರೆ.

ಕೊಡಗಿನವರಾದ ಗಣಪತಿ ಅವರು, 1986ರಲ್ಲಿ ಉತ್ತರಾಖಂಡ ಕೇಡರ್‌ನ ಐಪಿಎಸ್ ಅಧಿಕಾರಿ ಯಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ‌ ವಿಶೇಷ ಮಹಾನಿರ್ದೇಶಕರಾಗಿ ಮತ್ತು ವಿಮಾನ ನಿಲ್ದಾಣದ ಮುಖ್ಯಸ್ಥರಾಗಿ ದ್ದಾರೆ. ರಾಕೇಶ್‌ ಅಸ್ಥಾನಾ ಅವರು ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿ ನೇಮಕಗೊಂಡ ಬಳಿಕ, ಬಿಸಿಎಎಸ್‌ ಮುಖ್ಯಸ್ಥರ ಹುದ್ದೆ ಖಾಲಿ ಉಳಿದಿತ್ತು.

Leave a Reply

Your email address will not be published. Required fields are marked *