Monday, 12th May 2025

ಮಹಾರಾಷ್ಟ್ರ ಬಂದ್ ಗೆ ಕರೆ ನೀಡದಂತೆ ಬಾಂಬೆ ಹೈಕೋರ್ಟ್ ನಿರ್ಬಂಧ

ಮುಂಬೈ : ಥಾಣೆ ಜಿಲ್ಲೆಯ ಬದ್ಲಾಪುರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಆ.24 ರಂದು ವಿರೋಧ ಪಕ್ಷಗಳು ಕರೆ ನೀಡಿರುವ ‘ಮಹಾರಾಷ್ಟ್ರ ಬಂದ್’ ಕುರಿತು ಬಾಂಬೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿ ರಾಜ್ಯದಲ್ಲಿ ಬಂದ್ ಗೆ ಕರೆ ನೀಡದಂತೆ ಹೈಕೋರ್ಟ್ ಶುಕ್ರವಾರ ನಿರ್ಬಂಧ ಹೇರಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಬಂದ್ ಘೋಷಿಸಿದ್ದು, ಇದು ರಾಜ್ಯದ ಮಹಿಳೆಯರ ರಕ್ಷಣೆಗಾಗಿ ಎಂದು ಹೇಳಿದ್ದಾರೆ. ಬಂದ್ ಮಧ್ಯಾಹ್ನ 2 ಗಂಟೆಯವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

ವಿಶೇಷವೆಂದರೆ, ಕಾಂಗ್ರೆಸ್, ಎನ್ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನೆ (ಉದ್ಧವ್ ಠಾಕ್ರೆ ಬಣ) ರಾಜಕೀಯ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಶನಿವಾರ “ಮಹಾರಾಷ್ಟ್ರ ಬಂದ್” ಗೆ ಕರೆ ನೀಡಿದೆ. ಆದಾಗ್ಯೂ, ವಕೀಲರೊಬ್ಬರು ಈ ಕರೆಯನ್ನು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *