ಬೆಂಗಳೂರು: ಡಿ.14ರಂದು ರಾಜ್ಯದಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ದಟ್ಟ ಮಂಜು ಆವರಿಸಲಿದೆ. ಇನ್ನು ಡಿ.15 ಮತ್ತು ಡಿ.16ರಂದು ಕೂಡ ಇದೇ ರೀತಿಯ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ (Karnataka Weather) ತಿಳಿಸಿದೆ.
ಡಿ.17ರಂದು ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು,
ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಹಾಸನದಲ್ಲಿ ಕೆಲವೆಡೆ ಲಘು ಅಥವಾ ಸಾಧಾರಣ ಮಳೆ ಹಾಗೂ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಅದೇ ರೀತಿ ಡಿ.18ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಡಿ. 19ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ಸುತ್ತಮುತ್ತಲ ಭಾಗದ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25°C ಮತ್ತು 18 ° C ಆಗಿರಬಹುದು.
ಈ ಸುದ್ದಿಯನ್ನೂ ಓದಿ | Stock Market: ಕಡಿಮೆ ದರದಲ್ಲಿ 8 ಟಾಟಾ ಸ್ಟಾಕ್ಸ್! ಕುಬೇರರಾಗಲು ಸುವರ್ಣಾವಕಾಶ