Tuesday, 13th May 2025

ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರ ದಾಳಿ

ಶ್ರೀನಗರ: ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ.

ಮೂಲಗಳ ಪ್ರಕಾರ ರಾಜಧಾನಿ ಶ್ರೀನಗರದ ನಾಟಿಪೋರಾದ ಪಿಡಿಪಿ ಮುಖಂಡ ಫರ್ವೇಜ್ ಭಟ್ ಅವರ ನಿವಾಸದ ಎದುರು ಭದ್ರತೆಗಾಗಿ ನಿಯೋಜನೆಯಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಮನ್ಸೂರ್ ಅಹ್ಮದ್ ಎಂಬಾತನಿಗೆ ಗುಂಡೇಟು ತಗುಲಿದ್ದು, ಕೂಡಲೇ ಬೋನ್ ಅಂಡ್ ಜಾಯಿಂಟ್ ಆಸ್ಪತ್ರೆಗೆ ದಾಖಲಿಸ ಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ಮನ್ಸೂರ್ ಅಹ್ಮದ್ ಭಟ್ ಅವರ ವೈಯುಕ್ತಿಕ ಭದ್ರತಾ ಸಿಬ್ಬಂದಿಯಾಗಿದ್ದರು. ದಾಳಿಕೋರರು ಸಾಂಪ್ರದಾಯಿಕ ಕಾಶ್ಮೀರಿ ಉಡುಗೆಯಲ್ಲಿ ಬಂದಿದ್ದರು. ಉಡುಪಿನೊಳಗೆ ಎಕೆ 47 ಬಂದೂಕು ಹುದುಗಿಸಿಟ್ಟುಕೊಂಡಿದ್ದರು. ಮನೆಯೊಳಗೆ ಬರುತ್ತಿದ್ದಂತೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಶಬ್ಧಕೇಳಿ ಜನ ಸೇರುತ್ತಿದ್ದಂತೆಯೇ ಉಗ್ರರು ಓಡಿ ಹೋದರು. ಸಕ್ರಿಯ ರಾಜಕಾರಣಕ್ಕೆ ಸೇರಿದ ಬಳಿಕ ಇದು ನನ್ನ ಮೇಲೆ ನಡೆದ ಮೂರನೇ ದಾಳಿಯಾಗಿದೆ ಎಂದು ಹೇಳಿದ್ದಾರೆ.

 

Leave a Reply

Your email address will not be published. Required fields are marked *