ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಫಿನಾಲೆಗೆ ಹತ್ತಿರವಾಗುತ್ತಿದೆ. ಸದ್ಯ ಮನೆಯಲ್ಲಿ 10 ಮಂದಿಯಷ್ಟೆ ಉಳಿದುಕೊಂಡಿದ್ದಾರೆ. ಇವರ ಪೈಕಿ ಈ ವಾರ ಮನೆಯಿಂದ ಯಾರು ಹೊರ ಹೋಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಯಾಕೆಂದರೆ ಮನೆಯೊಳಗಿರುವ ಸ್ಪರ್ಧಿಗಳೆಲ್ಲರೂ ಅದ್ಭತವಾಗು ಆಡುತ್ತಿದ್ದಾರೆ. ಸದ್ಯ ದೊಡ್ಮನೆಯ ರೆಸಾರ್ಟ್ ಆಗಿ ಪರಿವರ್ತನೆಯಾಗಿದ್ದು, ಟಾಸ್ಕ್ಗಳು ನಡೆಯುತ್ತಿವೆ. ಇದಾದ ಬಳಿಕ ಇಂದು ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ.
ನಾಮಿನೇಷನ್ ಪ್ರಕ್ರಿಯೆ ವೇಳೆ ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ನಡುವೆ ದೊಡ್ಡ ಜಗಳ ನಡೆದಿದೆ. ಈ ಬಾರಿಯ ನಾಮಿನೇಷನ್ ಪ್ರಕ್ರಿಯೆಯನ್ನು ಬಿಗ್ ಬಾಸ್ ವಿಶೇಷವಾಗಿ ನೀಡಿದ್ದಾರೆ. ಅದೇನೆಂದರೆ, ನಾಮಿನೇಟ್ ಆಗೋ ಸ್ಪರ್ಧಿಗೆ ಕೃತಕವಾಗಿ ತಯಾರಿಸಿರುವ ಬಾಟಲಿಗಳಿಂದ ಹೊಡೆದು ನಾಮಿನೇಟ್ ಮಾಡಬೇಕಿದೆ. ಮೊದಲು ನಾಮಿನೇಟ್ ಮಾಡಬೇಕು. ಸೂಕ್ತ ಕಾರಣ ಕೊಡಬೇಕು. ಆ ಮೇಲೆ ಬಾಟಲಿಯಿಂದ ತಲೆಗೆ ಹೊಡೆಯಬೇಕು. ಇದು ಈ ವಾರದ ನಾಮಿನೇಷನ್ ಪ್ರಕ್ರಿಯೆ ಆಗಿದೆ.
ಹಾಗೆ ಉಗ್ರಂ ಮಂಜು ತ್ರಿವಿಕ್ರಮ್ನನ್ನೂ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಜೋರು ಮಾತುಕತೆ ನಡೆದಿದೆ. ಇಬ್ಬರ ನಡುವೆ ಕ್ಯಾರೆಕ್ಟರ್ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಕ್ಯಾಪ್ಟನ್ಸಿ ಓಟದಲ್ಲಿ ಸರಿಯಾದ ರೀಸನ್ ಕೊಡದೇ ಅದರಿಂದ ಆಚೆ ಹಾಕಿದ್ರಿ ಎಂದು ಮಂಜು ಹೇಳಿದ್ದಾರೆ. ಆಗ ರಾಜನ ಟಾಸ್ಕ್ನಲ್ಲಿ ಕುಳಿತುಕೊಂಡು ಮಾತಾಡೋಣ ಅಂತ ಹೇಳಿದ್ರು ಗಲಾಟೆ ಮಾಡಿಕೊಂಡ್ರಿ ಅಂತ ತ್ರಿವಿಕ್ರಮ್ ತಿರುಗೇಟು ಕೊಟ್ಟಿದ್ದಾರೆ. ಇದೇ ವಿಚಾರದ ಮಧ್ಯೆ ತ್ರಿವಿಕ್ರಮ್ ಮಂಜುಗೆ ಗೊತ್ತಿದೆ ನಿಮ್ಮ ಕ್ಯಾರೆಕ್ಟರ್ ಏನ್ ಅಂತ ನಮಗೂ ಗೊತ್ತು ಸ್ವಾಮಿ ಎಂದು ಹೇಳಿದ್ದಾರೆ.
ಅತ್ತ ಮೋಕ್ಷಿತಾ ಪೈ ಬಾಟಲಿಯಿಂದ ಹೊಡೆದಿದ್ದಾರೆ. ನೀವು ಮನೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ಕಾರಣ ನೀಡಿದ್ದಾರೆ. ಆಗ ಇಬ್ಬರ ಮಧ್ಯೆ ಟಾಕ್ ಫೈಟ್ ನಡೆದಿದೆ. ನಾಳೆಯಿಂದ ಈ ಮನೆಯಲ್ಲಿ ಹೇಗೆ ಕಾಣಿಸಿಕೊಳ್ಳಬೇಕು ಎಂದು ನಿಮ್ಮ ಬಳಿ ಟ್ಯೂಷನ್ಗೆ ಬರ್ತೀನಿ ಎಂದು ಮಂಜು ಹೇಳಿದ್ದಾರೆ. ನಿಮಗೆ ನಾನು ಕಾಣಿಸಿಕೊಳ್ಳಲು ಏನಾದರೂ ತಂದುಕೊಡಬೇಕಾ ಎಂದು ಕೇಳಿದ್ದಾರೆ. ಮಂಜು ಮಾತಿನಿಂದ ಕೆರಳಿದ ಮೋಕ್ಷಿ, ಅಂದರೆ ನೀವು ಮನೆಯಲ್ಲಿ ಕಾಣಿಸಿಕೊಳ್ಳೋದು ಒಬ್ಬರಿಗೆ ತೆಗೆದುಕೊಂಡು ಹೋಗಿ ಇಬ್ಬರಿಗೆ ಕೊಟ್ಟಾಗಲೇ ಅಂತಾನಾ? ನೀವು ಯಾರು ನನಗೆ ವೈಸ್ ರೈಸ್ ಮಾಡೋಕೆ ಎಂದು ರೊಚ್ಚಿಗೆದ್ದಿದ್ದಾರೆ. ಕ್ಷುಲ್ಲಕ ಕಾರಣಗಳಿಗೆ ನಾನು ನಾಮಿನೇಟ್ ಆಗಲ್ಲ ಎಂದ ಮಂಜುಗೆ, ನಿಮ್ಮನ್ನು ನಾಮಿನೇಟ್ ಮಾಡೋದು ನನ್ನಿಷ್ಟ ಎಂದು ಹೇಳಿದ್ದಾರೆ.
BBK 11: ನೀನ್ ಏನುಕ್ಕಮ್ಮಾ ಇದಿಯಾ ಬಿಗ್ ಬಾಸ್ನಲ್ಲಿ: ಚೈತ್ರಾ ತಲೆಗೆ ಬಾಟಲಿಯಿಂದ ಹೊಡೆದ ರಜತ್