Wednesday, 14th May 2025

ಕೂಚ್ ಬೆಹಾರ್: ಮತ ಚಲಾವಣೆಗೆ ನಿಂತಿದ್ದ ಮತದಾರನ ಹತ್ಯೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಶನಿವಾರ 4ನೇ ಹಂತದ ಮತದಾನ ನಡೆಯುತ್ತಿದೆ.

ಕೂಚ್ ಬೆಹಾರ್ ಜಿಲ್ಲೆಯ ಸಿತಾಲ್ಕುಚಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯ ಹೊರಗೆ ಸಾಲಿನಲ್ಲಿ ನಿಂತಿದ್ದ ಮತದಾರನೊಬ್ಬ ನನ್ನು ಟಿಎಂಸಿ ಕಾರ್ಯಕರ್ತರು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೃತ ಮತದಾರನನ್ನು 18 ವರ್ಷದ ಆನಂದ ಬರ್ಮನ್ ಎಂದು ಗುರುತಿಸಲಾಗಿದೆ.

ಟಿಎಂಸಿ ಕಾರ್ಯಕರ್ತರೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಹತ್ಯೆಗೀಡಾದ ಆನಂದ್ ಬರ್ಮನ್ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೃತ ಬರ್ಮನ್, ಟಿಎಂಸಿ ಬೆಂಬಲಿಗ ಎಂದು ಸ್ಥಳೀಯ ಟಿಎಂಸಿ ನಾಯಕರು ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *