Tuesday, 13th May 2025

ಸುಕ್ಮಾ, ದಂತೇವಾಡದಲ್ಲಿ 13 ಮಂದಿ ನಕ್ಸಲರು ಶರಣು

ಸುಕ್ಮಾ (ಛತ್ತೀಸಗಡ): ಛತ್ತೀಸಗಡದ ಬಸ್ತಾರ್ ಪ್ರದೇಶದ ಎರಡು ಜಿಲ್ಲೆಗಳಲ್ಲಿ ದಂಪತಿ ಸೇರಿದಂತೆ 13 ಮಂದಿ ನಕ್ಸಲರು ಶರಣಾಗಿದ್ದಾರೆ.

ಸುಕ್ಮಾ ಜಿಲ್ಲೆಯಲ್ಲಿ ಎಂಟು ನಕ್ಸಲರು, ನೆರೆಯ ದಂತೇವಾಡ ಜಿಲ್ಲೆಯಲ್ಲೂ ಐವರು ಮಾವೋವಾದಿಗಳು ಪೊಲೀಸರು ಸಿಆರ್‌ಪಿಎಫ್ ಅಧಿಕಾರಿಗಳ ಮುಂದೆ ಶರಣಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಶರಣಾದವರ ಪೈಕಿ ವಂಜಮ್ ಭೀಮಾ ಬಂಧನಕ್ಕೆ ಎರಡು ಲಕ್ಷ ರೂ. ಘೋಷಣೆ ಮಾಡಲಾಗಿತ್ತು. ಅವರ ಪತ್ನಿ ಮಾಧವಿ ಕಲಾವತಿ ಕೂಡ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆರು ಮಂದಿಯನ್ನು ರವಿ, ಕೋಸಾ, ದೇವಾ, ಡಿರ್ಡೊ ಗಂಗಾ, ಸೋಡಿ ದುಲಾ ಮತ್ತು ಕವಾಸಿ ದೇವಾ ಎಂದು ಗುರುತಿಸಲಾಗಿದೆ.

ದಂತೇವಾಡದಲ್ಲಿ ಇದುವರೆಗೆ 368 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *