Tuesday, 13th May 2025

ರಾಜ್ಯಾಧ್ಯಕ್ಷರ ರಾಜೀನಾಮೆ: ಮಣಿಪುರ ಕಾಂಗ್ರೆಸ್ ಗೆ ಬಿಗ್ ಶಾಕ್

ಮಣಿಪುರ : ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮಣಿಪುರ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ.

ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರುರಾಜೀನಾಮೆ ನೀಡಿದ್ದು, ಅವರಿಗೆ ಬೆಂಬಲವಾಗಿ ಕನಿಷ್ಠ ಎಂಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.

2022 ರಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ರಾಜಕೀಯ ಅಂಗಳದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಪಕ್ಷಾಂತರಕ್ಕೆ ವಾಲುತ್ತಿರುವ ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಉಳಿಸಿಕೊಳ್ಳುವ ಪ್ರಯತ್ನ ರಾಷ್ಟ್ರೀಯ ಕಾಂಗ್ರೆಸ್ ಮಾಡುತ್ತಿದೆಯಾದರೂ, ಗೋವಿಂದಾಸ್ ಕೊಂಥೌಜಮ್ ಹಾಗೂ ಅವರ ಬೆಂಬಲಿಗರಾದ ಶಾಸಕರು ಬಿಜೆಪಿಗೆ ಮಂಗಳವಾರ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *