Thursday, 15th May 2025

ಲಖೀಂಪುರ ಖೇರಿ ಹಿಂಸಾಚಾರ: ಸುಮೋಟೋ ಕೇಸ್, ನಾಳೆನೇ ವಿಚಾರಣೆ

ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ನಾಳೆ ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಲಖೀಂಪುರ ಹಿಂಸಾಚಾರ ಸಂಬಂಧ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪ್ರತಿಭಟನಾಕಾರರ ಮೇಲೆ ಆಶೀಶ್ ಮಿಶ್ರಾ ವಾಹನ ಚಲಾಯಿಸಿರುವ ಆರೋಪಗಳು ಕೇಳಿ ಬಂದಿದೆ.

ಪ್ರಕರಣ ಸಂಬಂಧ ಆಶೀಶ್ ಮಿಶ್ರಾ ಸೇರಿದಂತೆ 15-20 ಅಪರಿಚಿತರ ವಿರುದ್ಧ ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *