Thursday, 15th May 2025

ಕಂದಕಕ್ಕೆ ಉರುಳಿದ ಮಿನಿ ಬಸ್: 9 ಪ್ರಯಾಣಿಕರ ಸಾವು

ಜಮ್ಮು: ಗುರುವಾರ ಮಿನಿ ಬಸ್ ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿದ ಪರಿಣಾಮ, ಒಂಬತ್ತು ಪ್ರಯಾಣಿಕರು ಮೃತಪಟ್ಟು, 15 ಮಂದಿ ಗಾಯಗೊಂಡಿ ದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ.

ದೋಡಾದಿಂದ ಥಾತ್ರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಸುಯಿ ಗೌರಿ ಎಂಬಲ್ಲಿ ಅಪಘಾತಕ್ಕೀಡಾಗಿದೆ.

ಬಸ್ ಕಂದಕಕ್ಕೆ ಬಿದ್ದ ನಂತರ ಎರಡು ತುಂಡಾಯಿತು. ಎಂಟು ಮಂದಿ ಸ್ಥಳ ದಲ್ಲೇ ಮೃತಪಟ್ಟರು.

ಗಂಭೀರವಾಗಿ ಗಾಯ ಗೊಂಡಿದ್ದ ಒಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟರು. ಗಂಭೀರ ಗಾಯಗೊಂಡಿದ್ದ ಏಳು ಮಂದಿಯನ್ನು ಹೆಲಿಕಾಪ್ಟರ್ ಮೂಲಕ ಜಮ್ಮುವಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸ ಲಾಗುತ್ತಿದೆ. ಉಳಿದವರನ್ನು ದೋಡಾದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯ ಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.

ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬದವರಿಗೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *