Wednesday, 14th May 2025

ಕಟ್ಟಡದ ಚಾವಣಿ ಕುಸಿದು ಆರು ಮಂದಿ ಸಾವು

ಪುಣೆ: ಪುಣೆಯ ಯರವಾಡ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಚಾವಣಿ ಕುಸಿದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.

ಯರವಾಡ ವ್ಯಾಪ್ತಿಯ ಶಾಸ್ತ್ರಿ ನಗರದ ಲೇನ್ ಸಂಖ್ಯೆ 8 ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯು ತ್ತಿತ್ತು. ಗುರುವಾರ ರಾತ್ರಿ ಕಟ್ಟಡದ ಚಾವಣಿ ಕುಸಿ ಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದುವರೆಗೆ ಆರು ಮಂದಿ ಮೃತಪಟ್ಟಿರುವುದು ತಿಳಿದುಬಂದಿದೆ. ಅವರ ದೇಹಗಳನ್ನು ಸಾಸೂನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ರಕ್ಷಣಾ ಕಾರ್ಯಾ ಚರಣೆ ನಡೆಯುತ್ತಿದೆ.

ಘಟನೆ ಸಂಭವಿಸಿದಾಗ ಕಾರ್ಮಿಕರು ಚಾವಣಿ ಕೆಲಸದಲ್ಲಿ ತೊಡಗಿದ್ದರು. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.