Sunday, 11th May 2025

ಮುರಿದು ಬಿದ್ದ ಮೈತ್ರಿ: ಬಿಹಾರದಲ್ಲಿ ಮಹಾಘಟಬಂಧನ್ 2.0…

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆನ್ನಲಾಗಿದೆ.

ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ ನಡುವಿನ ಮೊದಲ ಮೈತ್ರಿ ಮುರಿದು ಬಿದ್ದ ಸ್ಥಳದಲ್ಲಿ ಮಹಾಘಟಬಂಧನ್ 2.0 ಪ್ರಾರಂಭವಾಗಲಿದೆ.

ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯ ಮಂತ್ರಿಯಾಗಿ ಮರಳಲಿದ್ದಾರೆ ಮತ್ತು ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಸಂಪುಟದಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರ ಮನೆಗೆ ಇಫ್ತಾರ್ ಕೂಟಕ್ಕಾಗಿ ಸೇರಿದಾಗಲೇ ಬಿಜೆಪಿ ಜೊತೆಗಿನ ಮೈತ್ರಿ ಮುರಿದು ಬೀಳುವ ಲಕ್ಷಣಗಳು ಗೋಚರವಾಗಿದ್ದವು.