Saturday, 10th May 2025

Actor Darshan: ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ (Actor Darshan) ಸೇರಿ 17 ಆರೋಪಿಗಳಿಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ಅವಧಿ ಇಂದಿಗೆ (ಸೆ.9) ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಧೀಶರು, ಆರೋಪಿಗಳಿಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದರಿಂದ, ಸದ್ಯಕ್ಕೆ ದರ್ಶನ್ ಗ್ಯಾಂಗ್‌ಗೆ ಜೈಲುವಾಸದಿಂದ ಮುಕ್ತಿ ಇಲ್ಲದಂತಾಗಿದೆ.

ಈ ಸುದ್ದಿಯನ್ನೂ ಓದಿ | Fake Marks Card: ಎಸ್‌ಡಿಎ ನೇಮಕಾತಿ ಅಕ್ರಮ; ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಸಿಸಿಬಿ ನೋಟಿಸ್‌

ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪೆನ್‌ಡ್ರೈವ್, ಹಾರ್ಡ್‌ಡಿಸ್ಕ್ ಸೇರಿ ಹಲವು ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ನ್ಯಾಯಾಧೀಶರು ಪರಿಶೀಲನೆ ನಡೆಸಲಿದ್ದಾರೆ.

ಇನ್ನು ಆರೋಪಿಗಳಿಗೆ ಈಗಾಗಲೇ ಚಾರ್ಜ್‌ ಶೀಟ್‌ ಪ್ರತಿ ಸಿಕ್ಕಿರುವುದರಿಂದ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇತ್ತೀಚೆಗೆ ಬಳ್ಳಾರಿ ಜೈಲಿಗೆ ಹೋಗಿದ್ದ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್‌ ತೂಗುದೀಪ ಅವರು ಜಾಮೀನು ವಕಾಲತ್ತಿಗೆ ದರ್ಶನ್‌ ಅವರಿಂದ ಸಹಿ ಪಡೆದಿದ್ದರು.

Leave a Reply

Your email address will not be published. Required fields are marked *