Tuesday, 13th May 2025

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌

ಬೆಂಗಳೂರು : ಕೇಂದ್ರ ಸರ್ಕಾರ ಕೃಷಿ ವಿರೋಧಿ ಮಸೂದೆಗಳನ್ನು ವಿರೋಧಿಸಿ, ರೈತರು ಭಾರತ್ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ರೈತರಿದ್ದರೇ ದೇಶ. ಈ ರೈತರ ಹೋರಾಟಕ್ಕೆ, ಪ್ರತಿಭಟನೆ ನನ್ನ ಬೆಂಬಲ ಇದೆ ಎಂದು ಹೇಳುವ ಮೂಲಕ, ರೈತರ ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.

ಟ್ವಿಟ್ ಮಾಡಿರುವ ನಟ ಡಾ.ಶಿವರಾಜ್ ಕುಮಾರ್, ರೈತ ದೇಶದ ಬೆನ್ನೆಲುಬು. ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂಬುದಾಗಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *