Tuesday, 13th May 2025

ನಟ, ಬರಹಗಾರ ಕೃಷ್ಣ ನಾಡಿಗ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಧಾರಾವಾಹಿಯಲ್ಲಿ ನಟಿಸಿದ್ದ ಪ್ರಸಿದ್ಧ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ನಂತರ ಆಸ್ಪತ್ರೆಗೆ ಸೇರಿಸ ಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

‘ಮಿಲನ’, ‘ದೇವಿ’, ‘ಪಾರು’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದರು. ಸುಮಾರು ನಾಲ್ಕುದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿನ ಇವರ ಸಾಧನೆಗೆ ಕೆಂಪೇಗೌಡ ಪ್ರಶಸ್ತಿ ಕೂಡ ಸಂದಿತ್ತು. ಇವರು ಪತ್ನಿ ಗೀತಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಚಿಕ್ಕಮಗಳೂರಿನ ಕಡೂರಿನ ಕೃಷ್ಣ ಅವರ ತಾಯಿ ವೀಣಾವಾದಕಿಯಾಗಿದ್ದರು. ತಂದೆ ಕೊಳಲು ವಾದಕ ಹಾಗೂ ಸಂಗೀತ ನಿರ್ದೇಶಕ.  ಇಂದು 10.30ರವರೆಗೆ ಬೆಂಗಳೂರಿನ ಗಿರಿನಗರದಲ್ಲಿ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Leave a Reply

Your email address will not be published. Required fields are marked *