ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ (Bigg Boss Kannada 11) ಹನ್ನೊಂದನೇ ವಾರ ಸಾಗುತ್ತಿದೆ. ಟಾಸ್ಕ್ಗಳ ಕಾವು ಏರುತ್ತಿದ್ದು ಬಿಗ್ ಬಾಸ್ ಕಠಿಣ ಸವಾಲುಗಳನ್ನೇ ಸ್ಪರ್ಧಿಗಳಿಗೆ ನೀಡುತ್ತಿದ್ದಾರೆ. ಸದ್ಯ ಮನೆಯಲ್ಲಿ 12 ಮಂದಿ ಇದ್ದಾರೆ. ಕಳೆದ ವಾರ ಮನೆಯಿಂದ ಯಾರೂ ಎಲಿಮಿನೇಟ್ ಆಗಿರಲಿಲ್ಲ. ವೋಟಿಂಗ್ ಲೈನ್ಸ್ ತೆರೆದಿರದ ಕಾರಣ ನಾಮಿನೇಟ್ ಆಗಿದ್ದ ಸದಸ್ಯರು ಸೇಫ್ ಆಗಿದ್ದರು. ಆದರೆ, ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯಾ ಸಿಂಧೋಗಿ ಅವರು ಡೇಂಜರ್ ಝೋನ್ನಲ್ಲಿದ್ದಾರೆ ಎಂಬ ಸುಳಿವನ್ನು ಸುದೀಪ್ ನೀಡಿದರು.
ಇದೀಗ ಈ ವಾರ ಮತ್ತೆ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಅದರಂತೆ ಈ ವಾರ ಮನೆಯಿಂದ ಹೊರಹೋಗಲು ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಈ ವಾರ 10ನೇ ಸೀಸನ್ ಸ್ಪರ್ಧಿಗಳಿಗೆ ಮನೆಯೊಳಗೆ ಅತಿಥಿಗಳಾಗಿ ಬಂದು ನಾಮಿನೇಷನ್ ಪ್ರಕ್ರಿಯೆಯಲ್ಲಿ ಸ್ಪರ್ಧಿಗಳಿಗೆ ಸಹಾಯ ಮಾಡುವ ಅವಕಾಶ ನೀಡಿದ್ದರು. ಡಿ.10ರ ಎಪಿಸೋಡ್ ನಲ್ಲಿ ಮನೆಯೊಳಗೆ ತುಕಾಲಿ ಸಂತು, ವರ್ತೂರು ಸಂತೋಷ್, ತನಿಷಾ, ಡ್ರೋನ್ ಪ್ರತಾಪ್, ನಮ್ರತಾ ಗೌಡ ಮತ್ತು ಕೊನೆಯದಾಗಿ ಕಳೆದ ಸೀಸನ್ ವಿನ್ನರ್ ಕಾರ್ತಿಕ್ ಬಂದಿದ್ದರು.
ಇವರುಗಳ ಫನ್ ಮಾಡುವುದರ ಜೊತೆಗೆ, ಅವರ ನೇತೃತ್ವದಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಬಿಗ್ ಬಾಸ್ ಮನೆಯಲ್ಲಿರುವ 11 ಸ್ಪರ್ಧಿಗಳ ಪೈಕಿ ಈ ವಾರ ಬಹುತೇಕ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ ಹಾಗೂ ಚೈತ್ರಾ ನಾಮಿನೇಟ್ ಲಿಸ್ಟ್ನಲ್ಲಿ ಇದ್ದಾರೆ.
ಜೊತೆಗೆ ಕ್ಯಾಪ್ಟನ್ ಗೌತಮಿ ಜಾಧವ್ ನೇರವಾಗಿ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದಾರೆ. ಕಳೆದ ವಾರ ಕ್ಯಾಪ್ಟನ್ಸಿ ಟಾಸ್ಕ್ ಆಡದಿರುವ ಕಾರಣ ನೀಡಿ ಮೋಕ್ಷಿತಾ ಅವರನ್ನು ಗೌತಮಿ ಈ ವಾರ ಮನೆಯಿಂದ ಹೊರಹೋಗಲು ನಾಮಿನೇಟ್ ಮಾಡಿದ್ದಾರೆ. ಈ 8 ಮಂದಿ ಪೈಕಿ ಈ ವಾರ ಬಿಗ್ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಹೋಗಲಿದ್ದಾರೆ ಎಂದು ಕಾದು ನೋಡಬೇಕಿದೆ. ಅತ್ತ ಐಶ್ವರ್ಯಾ ಅವರದ್ದು ಅದೃಷ್ಟ ಎಂದೇ ಹೇಳಬಹುದು. ಎರಡು ವಾರಗಳ ಹಿಂದೆ ಇವರು ಎಲಿಮಿನೇಟ್ ಆಗೋದು ಬಹುತೇಕ ಖಚಿತ ಆಗಿತ್ತು. ಆದರೆ, ಈ ವಾರ ಸೇಫ್ ಆಗಿದ್ದಾರೆ.
BBK 11: ಕ್ಯಾಪ್ಟನ್ಸಿ ಟಾಸ್ಕ್ನಿಂದ ಔಟ್: ಒಡೆದು ಚೂರಾಯಿತು ಮಂಜು-ಗೌತಮಿ ಫ್ರೆಂಡ್ಶಿಪ್