Tuesday, 13th May 2025

ಜ.25ರವರೆಗೂ ಕಂಗನಾಳನ್ನು ಬಂಧಿಸಕೂಡದು: ಬಾಂಬೆ ಹೈಕೋರ್ಟ್‌

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೇ ತಿಂಗಳ 25ರವರೆಗೂ ಅವರನ್ನು ಬಂಧಿಸ ದಂತೆ ಬಾಂಬೆ ಹೈಕೋರ್ಟ್ ಬಾಂದ್ರಾ ಪೊಲೀಸರಿಗೆ ಸೂಚನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಗೂ ಕೋಮು ದ್ವೇಷ ಮೂಡಿಸುವಂತಹ ಹೇಳಿಕೆಗಳನ್ನು ಅಪ್ ಲೋಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ಅಕ್ಟೋಬರ್ ನಲ್ಲಿ ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ನಟಿ ಕಂಗನಾ ರಣಾವತ್ ಮುಂಬೈನ ಬಾಂದ್ರಾ ಪೊಲೀಸರ ಎದುರು ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.

Leave a Reply

Your email address will not be published. Required fields are marked *