Monday, 12th May 2025

ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್’ನಲ್ಲಿ ಅಣ್ಣಯ್ಯ, ಬಿಂದಾಸ್, ರನ್ನ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಗುರುವಾರ ನಿಧನರಾಗಿದ್ದಾರೆ.

23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿದ್ದ ಚಂದ್ರಶೇಖರ್ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕೋವಿಡ್ ನಿಂದ ಗುಣಮುಖರಾಗಿದ್ದರೂ, ಅವರಿಗೆ ಶ್ವಾಸಕೋಶದ ಸಮಸ್ಯೆ ಉಲ್ಬಣಿಸಿತ್ತು.

ಈ ಹಿಂದೆ ಅಣ್ಣಯ್ಯ, ಬಿಂದಾಸ್, ರನ್ನ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಅವರು, ಇತ್ತೀಚೆಗೆ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ಘೋಷಿಸಿದ್ದರು. ಆದರೆ ಇದಕ್ಕೂ ಮೊದಲು ಅವರು ಇಹಲೋಕ ತ್ಯಜಿಸಿದ್ದಾರೆ.

ಕೆಲ ದಿನಗಳ ಹಿಂದೆ ನಿರ್ಮಾಪಕ ಕೋಟಿ ರಾಮು ಅವರನ್ನು ಕಳೆದುಕೊಂಡ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ.

Leave a Reply

Your email address will not be published. Required fields are marked *