Monday, 12th May 2025

ಟ್ರಕ್ಕಿಗೆ ಕ್ರೂಸರ್ ಡಿಕ್ಕಿ: 11 ಮಂದಿ ಯಾತ್ರಾರ್ಥಿಗಳ ಸಾವು

ಜೈಪುರ್: ರಾಜಸ್ಥಾನದ ನಾಗೂರ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.

ಬಿಕನೇರ್-ಜೋಧ್‍ಪುರ್ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ ದೇವಸ್ಥಾನದ ಮುಂಭಾಗ ವ್ಯಾನ್ ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಈ ದುರಂತೆ ಸಂಭವಿಸಿದೆ. ಮೃತರನ್ನು ಉಜ್ಜನಿ ಜಿಲ್ಲೆಯವರೆಂದು ಗುರುತಿಸಲಾಗಿದ್ದು, ಅವರೆಲ್ಲಾ ರಾಮದೇವರ ಮತ್ತು ಕರ್ನಿಮಠದಲ್ಲಿರುವ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮನೆಗೆ ಹಿಂತಿರುಗುತ್ತಿದ್ದವರು ಎನ್ನಲಾಗಿದೆ.

ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.

“ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯ ಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *