Tuesday, 13th May 2025

ಜಾರಿ ನಿರ್ದೇಶನಾಲದೆದುರು ವಿಚಾರಣೆಗೆ ಹಾಜರಾದ ಸಂಸದ ಅಭಿಷೇಕ್‌ ಬ್ಯಾನರ್ಜಿ

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಜಾರಿ ನಿರ್ದೇಶನಾಲಯದ ಅಧಿಕಾರಿ ಗಳ ಎದುರು ವಿಚಾರಣೆಗೆ ಹಾಜರಾದರು.

ಜಾಮ್‌ ನಗರ್‌ ಹೌಸ್‌ನಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಆಗಮಿಸಿದ ಅಭಿಷೇಕ್ ಬ್ಯಾನರ್ಜಿ, ‘ತನಿಖೆ ಎದುರಿಸಲು ಸಿದ್ಧನಿದ್ದೇನೆ. ಈ ಸಂಬಂಧ ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತೇನೆ’ ಎಂದು ಹೇಳಿದ್ದಾರೆ.

ವಿಚಾರಣೆ ವೇಳೆ ‘ಅಕ್ರಮ ಹಣ ವರ್ಗಾವಣೆ ಕಾಯ್ದೆ(ಪಿಎಂಎಲ್‌ಎ)ಯಡಿ ಅಭಿಷೇಕ್‌ ಬ್ಯಾನರ್ಜಿ ಅವರ ಹೇಳಿಕೆ ಗಳನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾತನಾಡಿದ್ದ ಬ್ಯಾನರ್ಜಿ, ‘ಕೇಂದ್ರದ ಯಾವುದೇ ತನಿಖಾ ಸಂಸ್ಥೆ, ನಾನು ಅಕ್ರಮ ವಹಿವಾಟಿನಲ್ಲಿ ಪಾಲ್ಗೊಂಡಿರುವುದನ್ನು ಸಾಬೀತುಪಡಿಸಿದರೆ, ನೇಣು ಬಿಗಿದುಕೊಳ್ಳುತ್ತೇನೆ’ ಹೇಳಿದ್ದರು.

ಅಭಿಷೇಕ್ ಬ್ಯಾನರ್ಜಿ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳ ಲಾಗುವುದು ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಸೆ.6 ರಂದು ದೆಹಲಿಯಲ್ಲಿ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿತ್ತು.

Leave a Reply

Your email address will not be published. Required fields are marked *