Wednesday, 14th May 2025

ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಐದು ಮಂದಿ ಸಾವು

ನವದೆಹಲಿ : ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಐದು ಜನರು ಮೃತಪಟ್ಟಿರುವ ಘಟನೆ ಈ ಘಟನೆ ನಡೆದಿದೆ.

ಏಳು ಪ್ರಯಾಣಿಕರಿರುವ ಕಾರು ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಏಳು ಪ್ರಯಾಣಿಕ ರಲ್ಲಿ ದಂಪತಿ ಮತ್ತು ಮೂವರು ಮಕ್ಕಳ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರು ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್ ಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯನ್ನು ಈ ವರ್ಷದ ಏಪ್ರಿಲ್ ನಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಇದು ಗಾಜಿಯಾಬಾದ್ ನ ದಾಸ್ನಾ ಮೂಲಕ ಉತ್ತರ ಪ್ರದೇಶದ ಮೀರತ್ ನೊಂದಿಗೆ ದೆಹಲಿಯನ್ನು ಸಂಪರ್ಕಿಸುತ್ತದೆ.

Leave a Reply

Your email address will not be published. Required fields are marked *