Wednesday, 14th May 2025

ಭಾರತ ಬಂದ್‌ಗೆ ಆಂಧ್ರ ಸರ್ಕಾರ ಬೆಂಬಲ

ಮಚಿಲಿಪಟ್ಟಣ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೋಮವಾರದ ಭಾರತ ಬಂದ್‌ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ಸೆ.26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳೂ ರಸ್ತೆಗಿಳಿಯುವುದಿಲ್ಲ. ಆಂಧ್ರ ಪ್ರದೇಶ ಸರ್ಕಾರ, ವೈಎಸ್‌ಆರ್ ಕಾಂಗ್ರೆಸ್ ಬಂದ್‌ಗೆ ಬೆಂಬಲ ನೀಡುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.

ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ವಿಶಾಖ ಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿ ಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‌ಗೆ ಬೆಂಬಲ ಘೋಷಿಸಿವೆ. 

Leave a Reply

Your email address will not be published. Required fields are marked *