Thursday, 15th May 2025

ಶ್ರೀಶೈಲಂನಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಯುವಕನಿಗೆ ಚಾಕು ಇರಿತ

ಶ್ರೀಶೈಲಂ: ಆಂಧ್ರಪ್ರದೇಶ ರಾಜ್ಯದ ಕರ್ನೂಲು ಶ್ರೀಶೈಲಂ ಯಾತ್ರಾ ಸ್ಥಳದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಬಾಟಲ್ ನಲ್ಲಿ ನೀರು ತುಂಬಿಕೊಳ್ಳುವ ವಿಚಾರವಾಗಿ ಹೋಟೆಲ್ ನಲ್ಲಿ ಆಂಧ್ರದ ಸ್ಥಳೀಯರು ಹಾಗೂ ಕನ್ನಡಿಗರ ಎರಡು ಗುಂಪು ಗಳ ನಡುವೆ ಜಗಳ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಯುವಕನೊಬ್ಬನಿಗೆ ಚಾಕು ಇರಿಯಲಾಗಿದೆ ಎಂದು ಹೇಳಲಾಗುತ್ತಿದೆ.

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯಾತ್ರಾಸ್ಥಳದಲ್ಲಿ ನಿಂತಿದ್ದ ನೂರಾರು ವಾಹನ ಗಳನ್ನು ಜಖಂಗೊಳಿಸಲಾಗಿದೆ.

ಕರ್ನಾಟಕದ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಬಾಗಲಕೋಟೆ ಮೂಲದ ಯುವಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಜಾರಿ ಗೊಳಿಸಲಾಗಿದೆ.