Sunday, 11th May 2025

ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಗುಂಡಿಕ್ಕಿ ಕೊಲೆ

ಲಖನೌ: ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಮೇಲೆ ಶುಕ್ರವಾರ ಬೆಳೀಗ್ಗೆ ಗುಂಡಿನ ದಾಳಿ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾ ಬಾದ್‌ನಲ್ಲಿ ಘಟನೆ ನಡೆದಿದೆ.

ಪಾರ್ಕ್‌ನಲ್ಲಿ ವಾಕಿಂಗ್ ನಡೆಸುತ್ತಿದ್ದ ವೇಳೆ ನರೇಶ್‌ ತ್ಯಾಗಿ (60) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ನರೇಶ್‌ ಅವರು, ಮುರಾದನಗರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಜಿತ್ ಪಾಲ್ ಅವರ ಚಿಕ್ಕಪ್ಪ ಎಂದು ತಿಳಿದು ಬಂದಿದೆ. ನರೇಶ್‌ ಅವರು ಪಿಡಬ್ಲ್ಯುಡಿ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಗಾಜಿಯಾಬಾದ್‌ನ ಸಿಹಾನಿ ಗೇಟ್ ಬಳಿ ಘಟನೆ ಸಂಭವಿಸಿದೆ. ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ ತ್ಯಾಗಿ ಅವರ ನಿವಾಸದ ಸಮೀಪವೇ ಇದು ಸಂಭವಿಸಿದೆ.

ನರೇಶ್‌ ಅವರು ದಿನನಿತ್ಯವೂ ವಾಕಿಂಗ್‌ಗೆ ಹೋಗುತ್ತಿದ್ದರು. ಇದನ್ನು ಗಮನಿಸಿ ಸ್ಕೆಚ್‌ ಹಾಕಿರುವ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳು ಹಿಸಲಾಗಿದೆ. ತನಿಖೆ ಆರಂಭವಾಗಿದೆ.

Leave a Reply

Your email address will not be published. Required fields are marked *