Monday, 12th May 2025

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕ ಸಾವು

ವಿರುಧ್‌ನಗರ: ಪಟಾಕಿ ತಯಾರಿಕೆಗೆ ಕಚ್ಚಾವಸ್ತು ಸಿದ್ಧಪಡಿಸುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿ ಕಾರ್ಮಿಕ ಮೃತಪಟ್ಟಿದ್ದಾರೆ.

ವಿರುಧ್‌ನಗರದ ಸಾತೂರು ಸಮೀಪದ ಬನೈಯಾಡಿಪಟ್ಟಿ ಗ್ರಾಮದಲ್ಲಿ ಜಯಪಾಲ್​ ಮಾಲೀಕತ್ವದ ಕಾರ್ಖಾನೆಯು ಪರವಾನಗಿ ಪಡೆದು ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಚ್ಚಾವಸ್ತು ಸಿದ್ಧಪಡಿಸುತ್ತಿದ್ದಾಗ ಸ್ಫೋಟ ಸಂಭವಿಸಿತು. ತೀವ್ರತೆಗೆ ಕೊಠಡಿ ಧ್ವಂಸಗೊಂಡಿದೆ. ಕಂಡಿಯಾಪುರದ ಕಾರ್ಮಿಕ ಷಣ್ಮುಗರಾಜ್ (36) ಎಂಬವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಅವಶೇಷಗಳಿಂದ ಹೊರತೆಗೆದು, ಸಾತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಕ್ಟೋಬರ್​ನಲ್ಲಿಶಿವಕಾಶಿಯ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದರು.

ಹದಿನೈದು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ವಿಜಯದಶಮಿ ಹಾಗೂ ದೀಪಾವಳಿಯ ಸಮಯದಲ್ಲಿ ದುರಂತ ನಡೆದಿತ್ತು. ಬೂದುಪಟ್ಟಿ ರೆಂಗಪಾಳ್ಯಂ ಪ್ರದೇಶದಲ್ಲಿರುವ ಕಾನಿಷ್ಕರ್ ಪಟಾಕಿ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ನಡೆದು 9 ಮಂದಿ ಸಾವನ್ನಪ್ಪಿದ್ದರು.

ರೆಡ್ಡಿಪಟ್ಟಿ ಪ್ರದೇಶ ದಲ್ಲಿರುವ ಮುತ್ತು ವಿಜಯನ್ ಒಡೆತನದ ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ಸ್ಫೋಟದಲ್ಲಿ ಓರ್ವ ಕಾರ್ಮಿಕ ಅಸುನೀಗಿದ್ದರು.

Leave a Reply

Your email address will not be published. Required fields are marked *