Monday, 12th May 2025

ಕಾಂಗ್ರೆಸ್ 300 ಸಂಸದರನ್ನು ಸ್ವಂತ ಬಲದ ಮೇಲೆ ಗೆಲ್ಲಿಸಲಾರದು: ಗುಲಾಂ ಬಾಂಬ್‌

#GhulamNabiAzad

ನವದೆಹಲಿ: ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿಕೆ ಸಂಚಲನ  ಮೂಡಿಸಿದೆ.

ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು ಬಯಸುತ್ತೇನೆ. ಆದರೆ ಆ ಪರಿಸ್ಥಿತಿ ಕಾಣುತ್ತಿಲ್ಲ ಎಂದಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 370ವಿ ರದ್ದುಗೊಳಿಸಿದ್ದು ದೊಡ್ಡ ರಾಜಕೀಯ ಹುನ್ನಾರ. ಸದ್ಯಕ್ಕೆ ವಿಷಯ ನ್ಯಾಯಾಲಯದಲ್ಲಿ ಇರುವು ದರಿಂದ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದರು.

ಕಾಂಗ್ರೆಸ್‍ನಲ್ಲಿ ಅತ್ಯುನ್ನತ ನಾಯಕರಾಗಿದ್ದ ಗುಲಾಂ ನಬಿ ಆಜಾದ್ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. ನಿವೃತ್ತಿಯ ಬಳಿಕ ಪಕ್ಷಕ್ಕೆ ಮುಜುಗರವಾಗುವಂತಹ ಹಲವಾರು ಹೇಳಿಕೆಗಳನ್ನು ನೀಡಿ ಗುಲಾಂ ನಬಿ ಆಜಾದ್ ಗಮನ ಸೆಳೆದಿದ್ದಾರೆ.