Sunday, 11th May 2025

ತಲಚ್ಚೇರಿಯಲ್ಲಿ ಮಾರ್ಕ್ಸ್‌ವಾದಿ ಕಾರ್ಯಕರ್ತನ ಹತ್ಯೆ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೋಮವಾರ ತಲಚ್ಚೇರಿಯ ನ್ಯೂ ಮಾಹೆಯಲ್ಲಿ ಈ ಘಟನೆ ನಡೆದಿದೆ.

ಕೊಲೆಯಾದವರನ್ನು ಪುನ್ನೋಲ್‌ನ ನಿವಾಸಿ ಎಂದು ಗುರುತಿಸಲಾಗಿದೆ. ಮೀನುಗಾರ ನಾಗಿದ್ದ ಕೊರಂಬಿಲ್ ಹರಿದಾಸ್ ಎಂಬಾತ ಕೊಲೆಯಾದ ವ್ಯಕ್ತಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ರಾಜಕೀಯ ಕೊಲೆ”ಯ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ಇದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ವರದಿಗಳ ಪ್ರಕಾರ, ಹರಿದಾಸ್ ಅವರು ಸಿಪಿಐಎಂನ ಸಕ್ರಿಯ ಸದಸ್ಯರಾಗಿದ್ದರು ಮತ್ತು ಅವರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅವರ ಮನೆಯ ಮುಂದೆ ದಾಳಿ ಮಾಡಿದ್ದಾರೆ.

ಕೊಲೆ ಆರೋಪದ ಮೇಲೆ ಸಿಪಿಐ(ಎಂ) ನ್ಯೂ ಮಾಹೆ ಮತ್ತು ತಲಚ್ಚೇರಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದೆ.