Wednesday, 14th May 2025

ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ, ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ನಟಿ ಶಾಂತಿನಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ಫೋಟೋಗಳನ್ನು ತೋರಿಸಿ ಜೀವ ಬೆದರಿಕೆಯೊಡ್ಡುತ್ತಿರುವು ದಾಗಿ ಮಾಜಿ ಸಚಿವ ಮಣಿಕಂಠನ್ ವಿರುದ್ಧ ದೂರು ದಾಖಲಿಸಿದ್ದರು. 2017ರಲ್ಲಿ ಮಣಿಕಂಠನ್ ಸಚಿವರಾಗಿದ್ದ ವೇಳೆ ಮಲೇಷ್ಯಾ ಮೂಲದ ಶಾಂತಿನಿ ಪರಿಚಯವಾಗಿತ್ತು ಎನ್ನಲಾಗಿದೆ. ಬಂಧನ ಭೀತಿ ಎದುರಾಗುತ್ತಿದ್ದಂತೆ ಮಾಜಿ ಸಚಿವರು ಮದ್ರಾಸ್ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಆದರೆ ಜಾಮೀನು ನಿರಾಕರಿಸಿತ್ತು. ನಿರೀಕ್ಷಣಾ ಜಾಮೀನು ರದ್ದು ಬಳಿಕ ಮಣಿಕಂಠನ್ ತಲೆಮರೆಸಿಕೊಂಡಿದ್ದರು.

Leave a Reply

Your email address will not be published. Required fields are marked *