Tuesday, 13th May 2025

ರೈಲ್ವೆ ನಿಲ್ದಾಣ, ಅಮಿತಾಬ್ ಬಚ್ಚನ್ ಬಂಗಲೆಯಲ್ಲಿ ಬಾಂಬ್: ಭದ್ರತೆ ಹೆಚ್ಚಳ

ಮುಂಬೈ : ಮುಂಬೈನ ಮೂರು ಪ್ರಮುಖ ರೈಲ್ವೆ ನಿಲ್ದಾಣಗಳು ಮತ್ತು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ ಗಳನ್ನು ಇರಿಸುವ ಬಗ್ಗೆ ಅನಾಮಧೇಯ ಕರೆ ಬಂದ ನಂತರ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಶುಕ್ರವಾರ ರಾತ್ರಿ ಕರೆ ಬಂದಿದ್ದು, ಅದರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ ಎಂಟಿ), ಬೈಕುಲ್ಲಾ, ದಾದರ್ ರೈಲ್ವೆ ನಿಲ್ದಾಣಗಳು ಮತ್ತು ಜುಹುನಲ್ಲಿರುವ ನಟ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ ಗಳನ್ನು ಇರಿಸಲಾಗಿದೆ ಎಂದು ಕರೆ ಮಾಡಿದವರು ತಿಳಿಸಿದ್ದಾರೆ.

ನಂತರ ನಡೆದ ಶೋಧ ಮತ್ತು ತನಿಖೆಯಲ್ಲಿ, ಕರೆ ಹುಸಿ ಎಂದು ಕಂಡುಬಂದಿದೆ. ಪೊಲೀಸರು ಕರೆ ಮಾಡಿದ ವ್ಯಕ್ತಿ ಮತ್ತು ಅವನ ಸ್ಥಳವನ್ನು ಪತ್ತೆ ಹಚ್ಚುತ್ತಿದ್ದಾರೆ. ‘ಕರೆ ಬಂದ ನಂತರ ಸರ್ಕಾರಿ ರೈಲ್ವೆ ಪೊಲೀಸರು, ರೈಲ್ವೆ ರಕ್ಷಣಾ ಪಡೆ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ಸ್ಥಳಗಳಿಗೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು’ ಎಂದು ಹೇಳಿದರು.

ಯಾವುದೇ ಅನುಮಾನಾಸ್ಪದ ಸಂಗತಿ ಕಂಡುಬಂದಿಲ್ಲ, ಆದರೆ ಅಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದೆ’ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *