Wednesday, 14th May 2025

ಗ್ಯಾಂಗ್‌ಸ್ಟರ್‌ ಸುರೇಶ್ ಪೂಜಾರಿ ಎಟಿಎಸ್‌ ಕಸ್ಟಡಿಗೆ

Suresh Poojari

ಮುಂಬೈ: ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮುಂಬೈ ಮತ್ತು ಕರ್ನಾಟಕದಲ್ಲಿ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ಸುರೇಶ್ ಪೂಜಾರಿಯನ್ನು ಫಿಲಿಪ್ಪಿನ್ಸ್‌ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.

ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬುಧವಾರ ದೆಹಲಿಯಲ್ಲಿ ಪೂಜಾರಿ ಅವರನ್ನು ತನ್ನ ಕಸ್ಟಡಿಗೆ ತೆಗೆದುಕೊಂಡಿತು. ಠಾಣೆ ನಗರದ ಪೊಲೀಸ್‌ ಠಾಣೆಯಲ್ಲಿ ಪೂಜಾರಿ ವಿರುದ್ಧ ದಾಖಲಾಗಿರುವ 27 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮುಂಬೈಗೆ ಕರೆತರಲಾಗಿದೆ ಎಂದು ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

ಪೂಜಾರಿ ವಿರುದ್ಧ ಠಾಣೆ, ಕಲ್ಯಾಣ, ಉಲ್ಲಾಸನಗರ, ಡೊಂಬಿವಲಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳ ತನಿಖೆಯನ್ನು ಎಟಿಎಸ್‌ಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.