Wednesday, 14th May 2025

ಹರಿಯಾಣದ ಹಿಂದೂ ದೇವಾಲಯಗಳಿಗೆ ಹೊಸ ಕಾನೂನು ಜಾರಿ

ಚಂಡೀಗಢ: ಹರಿಯಾಣದ ಬಿಜೆಪಿ ಸರಕಾರ ಹಿಂದೂ ದೇವಾಲಯಗಳಿಗೆ ಹೊಸ ಕಾನೂನನ್ನು ಜಾರಿಗೆ ತರಲಿದೆ.

ಶೇ.20ಕ್ಕಿಂತ ಕಡಿಮೆ ಹಿಂದೂಗಳಿರುವ ಹಳ್ಳಿಗಳಲ್ಲಿನ ದೇವಾಲಯಗಳ ಜವಾಬ್ದಾರಿಯನ್ನು ಸರಕಾರ ತೆಗೆದುಕೊಳ್ಳುತ್ತದೆ. ಇದಕ್ಕಾಗಿ ಜಿಲ್ಲೆಯಲ್ಲಿ ಮಂಡಳಿ ಸ್ಥಾಪಿಸಿ ಜಿಲ್ಲಾಧಿಕಾರಿಗೆ ಜವಾಬ್ದಾರಿ ನೀಡಲಿದೆ. 12 ಜಿಲ್ಲೆಗಳ ದೇವಾಲಯಗಳ ಶಿಥಿಲಾವಸ್ಥೆಯನ್ನು ಪರಿಗಣಿಸಿ, ಅವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಸರಕಾರ ತೆಗೆದುಕೊಳ್ಳುತ್ತದೆ.

ಈ ನಿಟ್ಟಿನಲ್ಲಿ ರಾಜ್ಯ ಗೃಹ ಇಲಾಖೆ ಮಸೂದೆಗೆ ಅನುಮೋದನೆಯನ್ನು ಪೂರ್ಣಗೊಳಿಸಿದೆ. ಮುಂಬರುವ ಚಳಿಗಾಲದ ವಿಧಾನಸಭೆಯ ಅಧಿವೇಶನದಲ್ಲಿ ಸರಕಾರ ಮಸೂದೆಯನ್ನು ಮಂಡಿಸಬಹುದು. ಹರಿಯಾಣದ ಅನೇಕ ಹಳ್ಳಿಗಳಲ್ಲಿ ಹಿಂದೂಗಳ ಕಡಿಮೆ ಜನಸಂಖ್ಯೆ ಇದೆ ಅಥವಾ ಹಿಂದೂಗಳು ಅಲ್ಲಿಂದ ವಲಸೆ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೇವಸ್ಥಾನಗಳು ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ.

ಸಿಖ್ಖರ ಧಾರ್ಮಿಕ ಸ್ಥಳಗಳನ್ನು ನೋಡಿಕೊಳ್ಳಲು ‘ಹರಿಯಾಣ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ’ಯನ್ನು ಸ್ಥಾಪಿಸಲಾಗಿದೆ.

ಮುಸ್ಲಿಮರ ಧಾರ್ಮಿಕ ಸ್ಥಳಗಳನ್ನು ‘ವಕ್ಫ್ ಬೋರ್ಡ್’ ನಿರ್ವಹಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹಿಂದೂ ದೇವಾಲಯಗಳ ನಿರ್ವಹಣೆಗೆ ಪ್ರತ್ಯೇಕ ಹಾಗೂ ಸಮಾನ ವ್ಯವಸ್ಥೆ ಕಲ್ಪಿಸಲು ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಹೇಳಿದೆ.

Leave a Reply

Your email address will not be published. Required fields are marked *