Sunday, 11th May 2025

ಇಂಡಿಯಾ ಮೈತ್ರಿಕೂಟಕ್ಕೆ ರಾಜ್ಯದಿಂದ 20 ಸೀಟುಗಳಲ್ಲಿ ಗೆಲ್ಲಿಸುವೆವು: ಡಿ.ಕೆ.ಶಿವಕುಮಾರ್

ವದೆಹಲಿ: “ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾ ಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಾವು ಬಿಜೆಪಿಯವರಂತೆ ಮಾತು ತಪ್ಪುವವರಲ್ಲ, ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇಡೀ ದೇಶಕ್ಕೆ ಕರ್ನಾ ಟಕ ಮಾದರಿಯನ್ನು ಹುಟ್ಟು ಹಾಕಿದ್ದೇವೆ.

ಪ್ರಧಾನಿಗಳು ಮಾತನಾಡುತ್ತಾ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗ ಲಿದೆ ಎಂದು ಹೇಳಿದ್ದಾರೆ. ರಾಜ್ಯದ ಆರ್ಥಿ ಕತೆಗೆ ಏನೂ ಆಗಿರುವುದಿಲ್ಲ, ಸಿದ್ದರಾಮಯ್ಯ ನೀಡಿರುವ ಅತ್ಯುತ್ತಮ ಬಜೆಟ್ ಕರ್ನಾಟಕವನ್ನು ಎಂದಿಗೂ ದಿವಾಳಿ ಮಾಡುವು ದಿಲ್ಲ.

“ಇಂಡಿಯಾ” ಕರ್ನಾಟಕದಲ್ಲಿ ಜನ್ಮ ಪಡೆದಿದೆ. ನಾವು ಒಗ್ಗಟ್ಟಾಗಿ ಇದ್ದೇವೆ, ಹಾಗೂ ಸಾಮೂಹಿಕವಾಗಿ ಲೋಕಸಭಾ ಚುನಾವಣೆ ಯನ್ನು ಎದುರಿಸುತ್ತೇವೆ.

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಖಂಡಿತ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ. ಕರ್ನಾಟಕ ಮಾದರಿಯ ಗೆಲುವು ನಮ್ಮ ಉತ್ಸಾಹ ಇಮ್ಮಡಿಗೊಳಿಸಿದೆ, ಇದರಂತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಕುರಿತು ಸಭೆಯಲ್ಲಿ 50 ನಾಯಕರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲಾಯಿತು.

Leave a Reply

Your email address will not be published. Required fields are marked *