Sunday, 11th May 2025

ಬಿಜೆಪಿ ಸೇರ್ಪಡೆಯಾದ ಜಿತಿನ್ ಪ್ರಸಾದ

ನವದೆಹಲಿ: ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಜಿತಿನ್ ಪ್ರಸಾದ, ‘ಕಾಂಗ್ರೆಸ್ ಜೊತೆ ಮೂರು ತಲೆಮಾರಿನ ಬಾಂಧವ್ಯ ಹೊಂದಿದ್ದೇನೆ. ಆದ್ದರಿಂದ ಈ ಮಹತ್ವದ ನಿರ್ಧಾರವನ್ನು ಸಾಕಷ್ಟು ಚಿಂತನೆಯ ಬಳಿಕೆ ತೆಗೆದುಕೊಂಡಿದ್ದೇನೆ. ಕಳೆದ 8-10 ವರ್ಷಗಳಲ್ಲಿ ನಿಜವಾದ ರಾಷ್ಟ್ರೀಯ ಪಕ್ಷ ಎಂಬುದೊಂದು ಇದ್ದರೆ ಅದು ‘ಬಿಜೆಪಿ’. ಇತರೆ ಪಕ್ಷಗಳು ಪ್ರಾದೇಶಿಕ’ ಎಂದು ಹೇಳಿದ್ದಾರೆ.

ಭಾರತೀಯ ಯುವ ಕಾಂಗ್ರೆಸ್‌ನಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಜಿತಿನ್, ರಾಜಕೀಯ ಜೀವನ ಪ್ರಾರಂಭಿಸಿದ್ದರು. 2004ರಲ್ಲಿ ಲೋಕಸಭೆಗೆ ಮೊದಲ ಬಾರಿ ಆಯ್ಕೆಯಾದರು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 2020 ಮಾರ್ಚ್ ತಿಂಗಳಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದರು.

Leave a Reply

Your email address will not be published. Required fields are marked *