Sunday, 11th May 2025

ಕೇಜ್ರಿವಾಲ್ ನ್ಯಾಯಾಂಗ ಬಂಧನ ಜು.25 ವರೆಗೆ ವಿಸ್ತರಣೆ

ವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನ ರೂಸ್ ಅವೆನ್ಯೂ ನ್ಯಾಯಾಲಯ ಜು.25ರವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಎಂದು ನಿರ್ಧರಿಸುವುದು ಕೇಜ್ರಿವಾಲ್ ಅವರಿಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಚುನಾಯಿತ ನಾಯಕ ಎಂಬ ಅಂಶದ ಬಗ್ಗೆ ನಮಗೆ ಅರಿವಿದೆ” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ನ್ಯಾಯಪೀಠ ಹೇಳಿದೆ.

ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಅವರ ಬಂಧನದ ಕಾನೂನುಬದ್ಧತೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಅದು ವಿಶಾಲ ಪೀಠಕ್ಕೆ ವರ್ಗಾ ಯಿಸಿತು.

ಈ ವಿಷಯವು ಜೀವಿಸುವ ಹಕ್ಕಿಗೆ ಸಂಬಂಧಿಸಿದೆ ಮತ್ತು ಬಂಧನದ ವಿಷಯವನ್ನ ದೊಡ್ಡ ನ್ಯಾಯಪೀಠಕ್ಕೆ ಉಲ್ಲೇಖಿಸಲಾಗಿರುವುದರಿಂದ, ಕೇಜ್ರಿವಾಲ್ ಅವರನ್ನ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

Leave a Reply

Your email address will not be published. Required fields are marked *