Wednesday, 14th May 2025

ಲಾಲು ಜಾಮೀನು ಅರ್ಜಿ ವಿಚಾರಣೆ ಇಂದು

ರಾಂಚಿ : ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ದೋಷಿಯಾಗಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ಜಾರ್ಖಂಡ್ ಹೈಕೋರ್ಟ್ ನಲ್ಲಿ ನಡೆಯಲಿದೆ.

1992-93 ರಲ್ಲಿ ಚಾಯಿಬಾಸಾ ಖಾಜಾನೆಯಿಂದ 33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೀಗಾಗಿ ಜಾಮೀನಿಗಾಗಿ ಲಾಲು ಪ್ರಸಾದ್ ಅನೇಕ ಬಾರಿ ಅರ್ಜಿ ಸಲ್ಲಿಸಿದ್ದಲಾಗಿದ್ದರೂ. ವಿಚಾರಣೆಯನ್ನು ಮುಂದೂಡಲಾಗಿತ್ತು.

ಇಂದು ಜಾರ್ಖಂಡ್ ಹೈಕೋರ್ಟ್ ನಲ್ಲಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗಲಿದೆಯಾ ಎಂಬುದು ಕಾದು ನೋಡಬೇಕು.

Leave a Reply

Your email address will not be published. Required fields are marked *