Thursday, 15th May 2025

ವಿಷಾನಿಲ ಸೋರಿಕೆ ಪ್ರಕರಣ: ಕಾರ್ಖಾನೆಗೆ ಕ್ಲೀನ್ ಚಿಟ್

ಲೂಧಿಯಾನ (ಪಂಜಾಬ್) : ಗಿಯಾಸ್ಪುರ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಯ ಎರಡು ಪುಟಗಳ ವರದಿಯನ್ನು ಲೂಧಿಯಾನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುರ್ಭಿ ಮಲಿಕ್ ಅವರು ಪಂಜಾಬ್ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ.

ತನಿಖಾ ವರದಿಯಲ್ಲಿ ಕಾರ್ಖಾನೆಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಹೈಡ್ರೋಜನ್ ಸಲ್ಫೈಡ್ ಅನಿಲವು 11 ಜನರ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿವೆ.

ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿ ಯಾವುದೇ ಕಾರ್ಖಾನೆಯಿಂದ ಹೊರ ಬರುವ ತ್ಯಾಜ್ಯ ಅಥವಾ ರಾಸಾಯನಿಕವನ್ನು ಚರಂಡಿಗೆ ಎಸೆಯಲಾಗುತ್ತಿದೆ ಎಂಬುದಕ್ಕೆ ಸಾಕ್ಷ್ಯಗಳಿಲ್ಲ. ಅಂತಿಮವಾಗಿ, 11 ಜನರ ಸಾವಿಗೆ ಯಾರೂ ಕಾರಣರಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೂಧಿಯಾನ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.