Wednesday, 14th May 2025

ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಕಾಲಾವಕಾಶ ಬೇಕು: ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್

ನಾಗ್ಪುರ: ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಹೆಚ್ಚುವರಿ ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.

ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಇಂದಿನಿಂದ ಡಿ.20 ರವರೆಗೆ ನಾಗ್ಪುರದಲ್ಲಿ ನಡೆಯಲಿದೆ.

ಶಾಸಕಾಂಗ ಸಭೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನನ್ನ ಮುಂದೆ ಬಾಕಿ ಇರುವ ಅನರ್ಹತೆಯ ವಿಚಾರಣೆಯನ್ನು ಪೂರ್ಣ ಗೊಳಿಸಬೇಕು. ಎರಡೂ ಜವಾಬ್ದಾರಿಗಳಿಗೆ ನ್ಯಾಯ ಒದಗಿಸಲು ನಾನು ಈ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 10 ರವರೆಗೆ ಕೆಲಸ ಮಾಡುತ್ತೇನೆ ಎಂದು ತೋರುತ್ತಿದೆ ಎಂದಿದ್ದಾರೆ.

ಕಳೆದ ವರ್ಷ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಪ್ರತಿಸ್ರ್ಪಧಿ ಶಿವಸೇನೆ ಬಣಗಳು ಪರಸ್ಪರರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅಡ್ಡ ಅರ್ಜಿಗಳನ್ನು ರಾಹುಲ್ ನಾರ್ವೇಕರ್ ವಿಚಾರಣೆ ನಡೆಸುತ್ತಿದ್ದಾರೆ. ನಾಗ್ಪುರದ ವಿಧಾನ ಭವನದಲ್ಲಿ ಎರಡೂವರೆ ಗಂಟೆಗಳ ಕಾಲ ಅರ್ಜಿಗಳ ವಿಚಾರಣೆ ನಡೆಸುವುದಾಗಿ ನಾರ್ವೇಕರ್ ತಿಳಿಸಿದ್ದಾರೆ.

ಶಿವಸೇನೆ ಅಧ್ಯಕ್ಷ ಠಾಕ್ರೆ ವಿರುದ್ಧ ಬಂಡಾಯವೆದ್ದ ಶಿಂಧೆ ನೇತೃತ್ವದ 40 ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಪ್ರಯತ್ನಿಸುತ್ತಿದೆ. ಇದು ಜೂನ್ 2022 ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಯಿತು ಮಾತ್ರವಲ್ಲದೆ 57 ಶಾಸಕರ ವಿಭಜನೆಗೆ ಕಾರಣವಾಯಿತು.

Leave a Reply

Your email address will not be published. Required fields are marked *