Tuesday, 13th May 2025

ಕಾಂಗ್ವೈ, ಫೌಗಕ್ಚಾವೊ ಪ್ರದೇಶದಲ್ಲಿ ಘರ್ಷಣೆ: ಹದಿನೇಳು ಜನರಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ಕೆಲವು ತಿಂಗಳಿಂದ ಕೋಮುಗಲಭೆ ಉಂಟಾಗಿದ್ದು, ಇದೀಗಾ ಮಣಿಪುರದ ಬಿಷ್ಣುಪುರ ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶದಲ್ಲಿ ಗುರುವಾರ ಮತ್ತೊಂದು ಘರ್ಷಣೆ ಸಂಭವಿ ಸಿದೆ. ಈ ವೇಳೆ ಸೇನೆ ಮತ್ತು ಆರ್‌ಎಎಫ್ ಸಿಬ್ಬಂದಿ ಇಬ್ಬರೂ ಅಶ್ರುವಾಯು ಪ್ರಯೋಗಿಸಿ ದ್ದರ ಪರಿಣಾಮವಾಗಿ ಹದಿನೇಳು ಜನರು ಗಾಯಗೊಂಡಿದ್ದಾರೆ.

ಇದರ ಮುಂಜಾಗ್ರತಾ ಕ್ರಮವಾಗಿ ಇಂಫಾಲ ಪೂರ್ವ ಮತ್ತು ಇಂಫಾಲ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ತಮ್ಮ ಜಿಲ್ಲೆಗಳಲ್ಲಿ ಈ ಹಿಂದೆ ಘೋಷಿಸಲಾಗಿದ್ದ ಕರ್ಫ್ಯೂ ಸಡಿಲಿಕೆ ಗಳನ್ನು ಹಿಂಪಡೆದಿದ್ದ ಪರಿಣಾಮ ಇಡೀ ಇಂಫಾಲ್ ಕಣಿವೆಯಲ್ಲಿ ಮತ್ತೆ ಕರ್ಫ್ಯೂ ವಿಧಿಸಲಾಗಿದೆ.

ಘರ್ಷಣೆಗೂ ಮೊದಲು ಗುರುವಾರ ರಾಜ್ಯ ಹೈಕೋರ್ಟ್ ಚುರಾಚಂದ್‌ಪುರ ಜಿಲ್ಲೆಯ ಉದ್ದೇಶಿತ ಸಮಾಧಿ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದ ನಂತರ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಸಾವಿಗೀಡಾದ ಕುಕಿ-ಜೋಮಿ ಜನರ ಸಾಮೂಹಿಕ ಸಮಾಧಿ ಕಾರ್ಯ ಸ್ಥಗಿತಗೊಂಡಿತು.

ಅಪೆಕ್ಸ್ ಬುಡಕಟ್ಟು ಸಂಸ್ಥೆ ಐಟಿಎಲ್‌ಎಫ್, ಬಿಷ್ಣುಪುರದ ಗಡಿಯಲ್ಲಿರುವ ಚುರಾ ಚಂದ್‌ಪುರ ಜಿಲ್ಲೆಯ ಹಾವೊಲೈ ಖೋಪಿ ಗ್ರಾಮದ ಸ್ಥಳದಲ್ಲಿ 35 ಜನರ ಸಾಮೂಹಿಕ ಸಮಾಧಿ ಕಾರ್ಯವನ್ನು ಮುಂದೂಡು ತ್ತಿರುವುದಾಗಿ ಹೇಳಿದೆ. ಭದ್ರತಾ ಪಡೆಗಳ ಚಲನವಲನ ತಡೆಯಲು ಸಾವಿರಾರು ಸ್ಥಳೀಯರು ಬೀದಿಗಿಳಿದಿದ್ದರಿಂದ ಬಿಷ್ಣುಪುರ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಉದ್ವಿಗ್ನತೆ ಉಂಟಾಗಿದೆ.

ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಇಂಫಾಲ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆಯನ್ನು ಹಿಂತೆಗೆದು ಕೊ೦ಡಿದೆ.

Leave a Reply

Your email address will not be published. Required fields are marked *