Wednesday, 14th May 2025

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

ವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಎಎಪಿಯ ಸಂಜಯ್ ಸಿಂಗ್ ಪ್ರತಿಕ್ರಿಯಿಸಿ, ನ್ಯಾಯಾಲಯದ ತೀರ್ಪನ್ನು ಶ್ಲಾಘಿಸಿದರು. ಇದನ್ನು “ಸತ್ಯದ ಗೆಲುವು” ಮತ್ತು “ಕೇಂದ್ರದ ಸರ್ವಾಧಿಕಾರದ ಮುಖಕ್ಕೆ ಕಪಾಳಮೋಕ್ಷ” ಎಂದು ಕರೆದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೋಪಾಲ್ ರೈ, “ಇದು ಕೇವಲ ಜಾಮೀನು ಅಲ್ಲ, ಆದರೆ ಬಿಜೆಪಿಯ ಸೋಲು” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್, ತಮ್ಮ ಸಹೋದರಿ ಮತ್ತು ಪಕ್ಷದ ಎಂಎಲ್ಸಿ ಕೆ.ಕವಿತಾ ಸೇರಿದಂತೆ ಎಲ್ಲರಿಗೂ ಶೀಘ್ರದಲ್ಲೇ ಜಾಮೀನು ಸಿಗುತ್ತದೆ ಎಂದು ಆಶಿಸಿದ್ದಾರೆ.

ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, 17 ತಿಂಗಳ ಸುದೀರ್ಘ ಸೆರೆವಾಸ ಮತ್ತು ವಿಚಾರಣೆಯ ವಿಳಂಬದ ಹಿನ್ನೆಲೆಯಲ್ಲಿ ಪಿಎಂಎಲ್‌ಎಯ ‘ತ್ರಿವಳಿ ಪರೀಕ್ಷೆ’ ಅವರಿಗೆ ಅನ್ವಯಿಸುವುದಿಲ್ಲ ಎಂದು ಗಮನಿಸಿದೆ.

“ನಮ್ಮ ಅನುಭವದಲ್ಲಿ, ವಿಚಾರಣಾ ನ್ಯಾಯಾಲಯಗಳು ಮತ್ತು ಹೈಕೋರ್ಟುಗಳು ಜಾಮೀನು ನೀಡುವಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತೋರುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *