Wednesday, 14th May 2025

ಸರ್ಕಾರದ ಸುಧಾರಣಾ ಕ್ರಮಗಳಿಗೆ ’ಜೈ’: ’ಕೈ’ ಜಾಡಿಸಿದ ಮಾಯಾವತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ(ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಬೆಂಬಲಿಸಿದ ಬಹುಜನ ಸಮಾಜ ಪಕ್ಷ, ಸರ್ಕಾರದ ಸುಧಾರಣಾ ಕ್ರಮಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದೆ.

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಎಸ್ ಪಿ ಸಂಸದ ಮಲೂಕ್ ನಗರ್ ಅವರು, ನಮ್ಮ ಪಕ್ಷ ಬಡವರು, ದಲಿತರು ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ವಂಚಿತ ಸಮುದಾಯಗಳ ಪರವಾಗಿದೆ ಎಂದರು.

ಕಾಶ್ಮೀರ ಮಸೂದೆ ಬೆಂಬಲಿಸಿದ ನಗರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಡ ಮನೆಗಳಲ್ಲಿ ಊಟ ಮಾಡುತ್ತಾರೆ. ಆದರೆ ಕೇಂದ್ರದ ಬಡವರ ಪರವಾದ ನೀತಿಗಳನ್ನು ವಿರೋಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *