Monday, 12th May 2025

ಎಲ್‌ಒಸಿ ಬಳಿ ಗಣಿ ಸ್ಫೋಟ: ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ. ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ.

ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತ ಪಟ್ಟ ಸೇನಾ ಸಿಬ್ಬಂದಿಯನ್ನು ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯ್ ಮಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇನ್ನೋರ್ವ ಯೋಧ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಣಿ ಸ್ಫೋಟ ಸಂಭವಿಸಿದಾಗ ಗಡಿಯಾಚೆಯಿಂದ ಭಯೋತ್ಪಾದಕರ ಒಳ ನುಸುಳುವಿಕೆಯನ್ನು ಪರಿಶೀಲಿಸುವ ಕ್ರಮಗಳ ಭಾಗ ವಾಗಿ ಸೇನೆಯ ಗಸ್ತು ಕರ್ತವ್ಯದಲ್ಲಿತ್ತು.

ಸ್ಫೋಟ ಪ್ರದೇಶವು ಒಳನುಸುಳುವಿಕೆ ನಿರೋಧಕ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿದ ನೆಲಬಾಂಬ್‌ ಗಳಿಂದ ಕೂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *