Sunday, 11th May 2025

ಬಹು-ಕೋಟಿ ಪಡಿತರ ವಿತರಣೆ ಹಗರಣ: ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ.

ಸುಮಾರು 17-18 ಗಂಟೆಗಳ ವಿಚಾರಣೆ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಚಿವ ಮಲ್ಲಿಕ್ ಅವರನ್ನು ಬಂಧಿಸಲಾಯಿತು ಎಂದು ಹೇಳಿದ್ದಾರೆ.

ಕೋಲ್ಕತ್ತಾದ ಹೊರವಲಯದಲ್ಲಿರುವ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ಸಚಿವರ ಮನೆಯಿಂದ 3.30ರ ಸುಮಾರಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಮಲ್ಲಿಕ್ ಅವರನ್ನು ಕರೆದೊಯ್ಯಲಾಯಿತು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ನಾಯಕ ಹಾಗೂ ಟಿಎಂಸಿ ಪಕ್ಷದ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ಈ ಸಂಚು ರೂಪಿಸಿದ್ದಾರೆ ಎಂದು ಎಂದು ಬಂಧನದ ಬಳಿಕ ಸಚಿವ ಮಲ್ಲಿಕ್ ಆರೋಪಿಸಿದ್ದಾರೆ. ಇಡಿ ಅಧಿಕಾರಿಗಳು ನಿನ್ನೆ ಮಲ್ಲಿಕ್ ಅವರ ಮನೆ ಮೇಲೆ ದಾಳಿ ನಡೆಸಿತ್ತು.

Leave a Reply

Your email address will not be published. Required fields are marked *