Sunday, 11th May 2025

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ಗೆ ನೋಟಿಸ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡುವ ಮೂಲಕ ಮೂಗುದಾರ ಹಾಕಲು ಸಿದ್ದತೆ ನಡೆಸಿದೆ.

ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಯತ್ನಾಳ್ ಗೆ ನೋಟಿಸ್ ನೀಡಿದ್ದು, ಆಡಳಿತ ಪಕ್ಷದ ಶಾಸಕರಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದು, ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದರ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಹಾಗೂ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *