Sunday, 11th May 2025

ಶಮಿ ಹುಟ್ಟೂರಾದ ಅಮ್ರೋಹದಲ್ಲಿ ಕ್ರಿಕೆಟ್‌ ಸ್ಟೇಡಿಯಂ: ಸಿಎಂ ಯೋಗಿ ಘೋಷಣೆ

ಖ್ನೋ: ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಭಾರತದ ಭರ್ಜರಿ ಗೆಲುವಿಗೆ ಬೃಹತ್‌ ಕೊಡುಗೆ ನೀಡುತ್ತಿರುವ ಮೊಹಮ್ಮದ್‌ ಶಮಿಗೆ ಮತ್ತೊಂದು ಖುಷಿಯ ಸುದ್ದಿ ಸಿಕ್ಕಿದೆ. ಮೊಹಮ್ಮದ್‌ ಶಮಿ ಹುಟ್ಟೂರಾದ ಅಮ್ರೋಹದಲ್ಲಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

ಈಗಾಗಲೇ 2.47 ಎಕರೆ ಜಾಗವನ್ನೂ ಸಹ ನಿಗದಿಪಡಿಸಲಾಗಿದ್ದು, ಅಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ರಾಜೇಶ್‌ ಕುಮಾರ್‌ ತ್ಯಾಗಿ ಸ್ಥಳ ಪರಿಶೀಲನೆ ಸಹ ನಡೆಸಿದ್ದಾರೆ. ಜೊತೆಗೆ ಸ್ಟೇಡಿಯಂ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಕಚೇರಿಗೆ ಪತ್ರವನ್ನೂ ರವಾನಿಸಲಾಗಿದೆ.

ಉತ್ತರ ಪ್ರದೇಶದ 20 ಗ್ರಾಮೀಣ ಜಿಲ್ಲೆಗಳಲ್ಲಿ ಸ್ಟೇಡಿಯಂ ನಿರ್ಮಿಸುವ ಯೋಜನೆಗೆ ಬಿಜೆಪಿ ಸರ್ಕಾರ ಮುಂದಾಗಿತ್ತು. ಈ ಜಿಲ್ಲೆಗಳ ಪೈಕಿ ಈಗ ಅಮ್ರೋಹ ವನ್ನೂ ಸಹ ಆಯ್ಕೆಮಾಡಿಕೊಳ್ಳಲಾಗಿದ್ದು, ಗ್ರಾಮೀಣ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ.

Leave a Reply

Your email address will not be published. Required fields are marked *