Sunday, 11th May 2025

NDA ಮೈತ್ರಿಕೂಟಕ್ಕೆ ಓಂ ಪ್ರಕಾಶ್ ರಾಜ್‌ಭರ್ ಸೇರ್ಪಡೆ

ವದೆಹಲಿ: ಭಾರತೀಯ ಸಮಾಜ ಪಕ್ಷದ ಸಂಸ್ಥಾಪಕ ನಾಯಕ ಓಂ ಪ್ರಕಾಶ್ ರಾಜ್‌ಭರ್ ಭಾನುವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡರು.

ನಾವು 2024 ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಹೋರಾಡಲು ನಿರ್ಧರಿಸಿದ್ದೇವೆ. ನಾನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು (ಉತ್ತರ ಪ್ರದೇಶ) ಮುಖ್ಯ ಮಂತ್ರಿ ಯೋಗಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ರಾಜ್‌ಭರ್ ತಿಳಿಸಿದರು.

ಜು.18ರಂದು ದೆಹಲಿಯಲ್ಲಿ ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸಲಿದ್ದೇವೆ. ನನಗೆ ಸಚಿವ ಸ್ಥಾನ ಮುಖ್ಯವಲ್ಲ, ಈಗ ಉತ್ತರ ಪ್ರದೇಶದಲ್ಲಿ ಸ್ಪರ್ಧೆ ಇಲ್ಲ ಎಂದು ಎಸ್‌ಬಿ ಎಸ್‌ಪಿ ಮುಖ್ಯಸ್ಥರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಮ್ಮ ಪಕ್ಷವನ್ನು ಎನ್‌ಡಿಎ ತೆಕ್ಕೆಗೆ ಸ್ವಾಗತಿಸಿರುವ ಅಮಿತ್ ಶಾ, ರಾಜ್‌ಭರ್ ಅವರ ಪ್ರವೇಶವು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕೇಂದ್ರದಲ್ಲಿ ಆಡಳಿತಾರೂಢ ಮೈತ್ರಿಕೂಟಕ್ಕೆ ಮತ್ತಷ್ಟು ಬಲ ನೀಡುತ್ತದೆ ಎಂದು ಹೇಳಿದರು.

Leave a Reply

Your email address will not be published. Required fields are marked *